ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: “ಶ್ರದ್ದಾ ಭಕ್ತಿಯಿಂದ ಮಾಡುವ ಕಾಯಕಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ” ಎಂಬ ನಂಬಿಕೆಗೆ ಸಾಕ್ಷಿಯಾಗಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ನಡೆಸುತ್ತಿರುವ “”ಸ್ವಚ್ಛ ಕಡಲತೀರ – ಹಸಿರು ಕೋಡಿ” ಅಭಿಯಾನದ 11 ನೇ ಹಂತ ಯಶಸ್ವಿಯಾಗಿ ನೆರವೇರಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು , ಬೋಧಕ , ಬೋಧಕೇತರ ವರ್ಗದವರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ವಿದ್ಯಾರ್ಥಿ ಪೋಷಕರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಮತ್ತು ಪರಿಸರ ಪ್ರಿಯರು ಈ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೋಡಿಯ ಡೆಲ್ಟಾ ಪಾಯಿಂಟ್ ನಿಂದ ಹಳೆಅಳಿವೆ ಕಿನಾರ ತುದಿಯ ವರೆಗಿನ ಸಮುದ್ರ ಕಿನಾರೆಯನ್ನು ಸ್ವಚ್ಛಗೊಳಿಸಿದರು.” ಪರಿಸರ ಸಂರಕ್ಷಣೆ ” ಎಂಬ ದೇವತಾ ಕಾಯಕದಲ್ಲಿ ಸಹಕರಿಸುತ್ತಿರುವ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿಗಳು ಮತ್ತು ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ವಂದಿಸಿದರು.












