ಕುಂದಾಪುರ: ನೇರಳಕಟ್ಟೆಯಲ್ಲಿ ಎರಡು ವಾಮನ ಮುದ್ರೆ ಕಲ್ಲು ಪತ್ತೆ

0
647

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕುಂದಾಪುರ ತಾಲೂಕು ಕರ್ಕಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇರಳಕಟ್ಟೆ ಅರಳಿಕಟ್ಟೆಯ ಬಾವಿಕಟ್ಟೆಯ ಬಳಿ ಹಾಗೂ ನೇರಳಕಟ್ಟೆಯ ಜಾಡ್ಕಟ್ಟು ರಾಮ ಮೊಗವೀರ ಇವರ ಮನೆಯ ಬಳಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಮಿಪದಲ್ಲಿ ವಾಮನ ಮುದ್ರಿಕೆಯ ಕಲ್ಲು ಪತ್ತೆಯಾಗಿದೆ.

ಶೈವರು,ವೈಷ್ಣವರು,ಜೈನರು ಆರಾಧನೆಗೆ ಸಂಬಂಧಿಸಿದ ಹಾಗೂ ಅವರ ಆರಾಧನೆಗೆ ಗಡಿಗಳನ್ನು ಗುರುತಿಸುವುದು ಸಹಜ.

Click Here

ಶೈವರ ಗಡಿಗಳಿಗೆ ಲಿಂಗ ಮುದ್ರಿಕೆ ಕಲ್ಲು ಅಥವಾ ಶೈವ ಮುದ್ರಿಕೆ ಕಲ್ಲು,ವೈಷ್ಣವರ ಗಡಿಗಳಿಗೆ ವಾಮನ ಮುದ್ರಿಕೆ ಕಲ್ಲು,ಜೈನರ ಗಡಿಗಳಿಗೆ ಮುಕ್ಕೋಡೆ ಕಲ್ಲುಗಳನ್ನು ಹಾಕುತ್ತಿದ್ದರು.ಈ ಮೂಲಕ ಬಹಳ ಸ್ಪಷ್ಟವಾಗಿ ಅವರವರ ಗಡಿಗಳನ್ನು ಗುರುತಿಸಲು ಸಾಧ್ಯವಾಗುತ್ತಿತ್ತು.

ನೇರಳಕಟ್ಟೆಯ ಎರಡು ವಾಮನ ಮುದ್ರಿಕೆಯ ಕಲ್ಲುಗಳಲ್ಲಿ ಸೂಯ೯ ಚಂದ್ರ ಇರುವ ತನಕ ಅಜರಾಮರವಾಗಿರಲಿ ಎಂದು ಸಂದೇಶ ಸಾರುವಂತಹ‌ ಸೂಯ೯ ಹಾಗೂ ಚಂದ್ರ ಶಿಲ್ಪ ಕಲೆಯೊಂದಿಗೆ ವ್ಯಕ್ತಿ ಅಂದರೆ ವಾಮನ ಅವರ ಒಂದು ಕೈಯಲ್ಲಿ ಕೊಡೆ ಇನ್ನೊಂದು ಕೈಯಲ್ಲಿ ಕಮಂಡಲವಿದೆ‌ .ಇದು ವಾಮನ ಶಿಲ್ಪ ಕಲೆಯಲ್ಲಿ ಸಹಜವಾಗಿ ಕಂಡು ಬರುತ್ತದೆ.

ಅಂತೆಯೇ ವಾಮನ ಮುದ್ರಿಕೆಯ ಕಲ್ಲಿನ ಅಣತಿ ದೂರದಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನವಿದೆ. ಈ ವಾಮನ ಮುದ್ರಿಕೆ ಕಲ್ಲು ಶ್ರೀ ಲಕ್ಷ್ಮೀ ವೆಂಕಟರಮಣ ದೇಗುಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಿದೆ.ಈ ಹಿಂದೆ ನೇರಳಕಟ್ಟೆಯ ಬಾವಿ ಕಟ್ಟೆ‌ ಬಳಿ,ಕಂದಾವರದ ಶ್ರೀ ವೀರಾಂಜನೇಯ ದೇವಾಲಯದ ಬಳಿ,ನಂದ್ರೋಳ್ಳಿ ಶ್ರೀ ಲಕ್ಷ್ಮೀನಾರಾಯಣ ದೇವಾಲಯದ ಬಳಿ ವಾಮನ ಮುದ್ರಿಕೆ ಕಲ್ಲು ಕಂಡು ಬಂದಿದೆ.

Click Here

LEAVE A REPLY

Please enter your comment!
Please enter your name here