ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಂಕದಕಟ್ಟೆ ವಾರ್ಡ್ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ

0
410

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಭಾರತೀಯ ಜನಸಂಘ ಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿಯ ಪ್ರಯುಕ್ತ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಸ್ವಬೂತ್ ನಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರಾದ ಸದಾನಂದ ನಾಯ್ಕ್ ಅವರ ನಿವಾಸದಲ್ಲಿ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟ ಅವರ ಜೀವನ, ಅವರ ತ್ಯಾಗ ಬಲಿದಾನ, ಪಕ್ಷದ ಕಾರ್ಯಕರ್ತರಿಗೆ ಅವರು ಹಾಕಿಕೊಟ್ಟ ದಾರಿ, ಆದರ್ಶವನ್ನು ಸ್ಮರಿಸಿಕೊಳ್ಳುವುದರ ಮೂಲಕ ಅವರ ಜಯಂತಿಯನ್ನು ಆಚರಿಸಲಾಯಿತು.

Click Here

ಕಾರ್ಯಕ್ರಮದಲ್ಲಿ ಬೂತ್ ಅಧ್ಯಕ್ಷರಾದ ಹರೀಶ್ ಪೂಜಾರಿ, ಕೋಟೇಶ್ವರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣ ಗೊಲ್ಲ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್, ವಾರ್ಡ್ ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯ ಸಂತೋಷ್ ಹಂಗಳೂರು, ಹಿರಿಯ ಕಾರ್ಯಕರ್ತರಾದ ಸದಾನಂದ ನಾಯ್ಕ್, ಗಿರೀಶ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here