ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಗೆ ಲಯನ್ ಪ್ರಥಮ ಉಪ ಜಿಲ್ಲಾ ಗವರ್ನರ್ ಅಧೀಕೃತ ಭೇಟಿ.

0
273

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಲಯನ್ ಪ್ರಥಮ ಉಪ ಜಿಲ್ಲಾ ಗವರ್ನರ್ ನೇರಿ ಕರ್ನೇಲಿಯೋ ಇವರು ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಗೆ ಅಧೀಕೃತ ಭೇಟಿ ನೀಡಿದರು.

ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮಕ್ಕೆ, ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ ಪದಾಧಿಕಾರಿಗಳು ಹಾಗೂ ಸದಸ್ಯರು ಅವರನ್ನು ಸ್ವಾಗತಿಸಿಕೊಂಡರು.

ಕ್ಲಬ್‍ನ ಕಾರ್ಯದರ್ಶಿ ಅಜಿತ್ ಶೆಟ್ಟಿ ಕೊತ್ತಾಡಿ ಇವರು ಕ್ಲಬ್‍ನ ಸೇವಾ ಚಟುವಟಿಕೆಗಳ ವರದಿಯನ್ನು ವಾಚಿಸಿದರು.
ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ.ಕೆ ಇವರು ಲಯನ್ ಫ್ಲಾಗ್ ಸೆಲ್ಯುಟೇಷನ್ ಹಾಗೂ ಸುಭಾಸ್ ಶೆಟ್ಟಿ ಮಧುವನ ಇವರು ಲಯನ್ ಕೋಡ್ ಆಫ್ ಕಂಡಕ್ಟ್ ವಾಚಿಸಿದರು.
ಸಭಾ ಕಾರ್ಯಕ್ರಮದ ಸೇವಾ ಚಟುವಟಿಕೆಯ ಅಂಗವಾಗಿ ನೆರೆ ಪರಿಹಾರದ ಅಂಗವಾಗಿ ಜಿಲ್ಲಾ ಲಯನ್ಸ್ ನವರು ನೀಡಿದ 10 ಆಹಾರದ ಕಿಟ್ ಗಳನ್ನು ಮತ್ತು ಕಾಳಾವರ ವರದರಾಜ್ ಶೆಟ್ಟಿ ಯವರು ಕೋಟೇಶ್ವರ ಲಯನ್ಸ್ ಕ್ಲಬ್ ನ ಜೆ.ಪಿ ಶೆಟ್ಟಿ ಯವರ ಮುಖಾಂತರ ನೀಡಿದ ರೂ. 10,000/ ರೂ. 25,000/= ಚೆಕ್ಕುಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

Click Here

ಪ್ರೋ.ಯಾಳಕ್ಲು ಚಂದ್ರಶೇಖರ್ ಶೆಟ್ಟಿ ಇವರು ಪ್ರಥಮ ಉಪಜಿಲ್ಲಾ ಗವರ್ನರ್ ನೇರಿ ಕರ್ನೇಲಿಯೋ ಇವರ ಪರಿಚಯ ವಾಚಿಸಿದರು.

ಲಯನ್ಸ್ ಕ್ಲಬ್ ಕಲ್ಯಾಣಪುರ ಇದರ ಅಧ್ಯಕ್ಷ ಜಾರ್ಜ್ ಡಿಸೋಜಾ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬನ್ನಾಡಿ ವಡ್ಡರ್ಸೆ ಲಯನ್ಸ್ ಕ್ಲಬ್‍ನ ಅಧ್ಯಕ್ಷ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ ಕ್ಲಬ್‍ನ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಅತಿಥಿ, ಅಭ್ಯಾಗತರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಇದರ ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ ಯವರು ವಂದಿಸಿದರು.

Click Here

LEAVE A REPLY

Please enter your comment!
Please enter your name here