ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 7ರ ಸೋಮವಾರ ಬೈಂದೂರು ಮತ್ತು ಕುಂದಾಪುರಕ್ಕೆ ಭೇಟಿ ನೀಡಲು ಆಗಮಿಸುವ ಹಿನ್ನಲೆಯಲ್ಲಿ ಸದರಿ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು ಕೆ.ಎಸ್.ಆರ್.ಟಿ.ಸಿ. ನಿಗಮದ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ಸಾಂದರ್ಭಿಕ ಒಪಂದದ ಮೇರೆಗೆ ನಿಯೋಜಿಸಲಾಗಿತುವ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪುರ ಮತ್ತು ಉಡುಪಿ ತಾಲ್ಲೂಕು ವಲಯಗಳಲ್ಲಿ ಕಾರಾಚರಣೆಯಲ್ಲಿರುವ ಸಾರಿಗೆಗಳ ಕಾರಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆ..ಎಸ್.ಆರ್.ಟಿ.ಸಿ. ಕುಂದಾಪುರ ಘಟಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರಿಂದಾಗಿ ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸುವಂತೆ ಕೋರಿದ್ದಾರೆ.










