ಕೊಡಚಾದ್ರಿ ಕೇಬಲ್ ಕಾರ್ ಯೋಜನೆಯ ಶೀಘ್ರ ಅನುಷ್ಠಾನ : ಬಿ. ವೈ ರಾಘವೇಂದ್ರ

0
736

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವರೆಗೆ ಕೇಬಲ್ ಕಾರ್ ಯೋಜನೆಯು ಶೀಘ್ರ ಅನುಷ್ಟಾನಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಈ ಸಂಬಂಧ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ National Highways Logistics Management Limited (NHLML) ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಧ್ಯಯನ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನೆಡೆಸಿದೆ.

Click Here

ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ಸಮಸ್ಯೆಯ ಕುರಿತು ನವೆಂಬರ್ 19 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರೊoದಿಗೆ ಚರ್ಚಿಸಿದ್ದು, ಕೇಂದ್ರದ ಪರ್ವತ ಮಾಲಾ ಅಡಿಯಲ್ಲಿ ಬರುವ ನೂತನ ಕೇಬಲ್ ಕಾರ್ ಯೋಜನೆಯು ಶೀಘ್ರ ಅಳವಡಿಸುವ ಕಾರ್ಯ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭ NHLML ದೆಹಲಿಯ ಹಿರಿಯ ಮ್ಯಾನೇಜರ್ ಅನುರಾಗ್ ತ್ರಿಪಾಟಿ, NHLML ಬೆಂಗಳೂರು ಮ್ಯಾನೇಜರ್ ರೀನಾ ಪವಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಶಿವಮೊಗ್ಗದ ಪೀರ್ ಪಾಷಾ, ಡಿಪಿಆರ್ ಕನ್ಸಲ್ಟೆಂಟ್ ಶ್ರವಣ ಕುಮಾರ್, ಪ್ರವಾಸೋಧ್ಯಮ ಇಲಾಖೆಯ ಗುರುಪ್ರಸಾದ್, ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಸಂಪತ್ ಶಾಸ್ತ್ರೀ, ಬೈಂದೂರಿನ ವೆಂಕಟೇಶ್ ಕಿಣಿ, ಶಿವಕುಮಾರ್ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here