ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಆದತ್ಯೆ ನೀಡಬೇಕು- ಅಜಿತ ದೇವಾಡಿಗ

0
308

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಗ್ರಾಮೀಣ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಈ ದಿಸೆಯಲ್ಲಿ ಸ್ಥಳೀಯ ಸಂಘಸಂಸ್ಥೆಗಳು ಕಾರ್ಯೋನ್ಮುಖವಾಗುತ್ತಿರುವುದು ಶ್ಲಾಘನೀಯ ಎಂದು ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಹೇಳಿದ್ದಾರೆ.

ನವೋದಯ ಫ್ರೆಂಡ್ಸ್ ಹರ್ತಟ್ಟು ಗಿಳಿಯಾರು ನೆಹರು ಯುವ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ ಹರ್ತಟ್ಟು ಪರಿಸರದಲ್ಲಿ ತಾಲೂಕು ಮಟ್ಡದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಯುವ ಸಮೂಜ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಆ ಮೂಲಕ ಸಾಧನೆ ಪುಟ ತೆರೆಯಲಿ ಎಂದು ಆಶಿಸಿದರಲ್ಲದೆ ನವೋದಯ ಫ್ರೆಂಡ್ಸ್ ಸಾಮಾಜಿಕ ಕಾಳಜಿಯ ಜೊತೆ ಕ್ರೀಡೆಗೆ ಆದ್ಯತೆ ನೀಡುತ್ತಿರುವುದು ಪ್ರಶಂಸನೀಯ ಎಂದರು.

Click Here

ಸಭೆಯ ಅಧ್ಯಕ್ಷತೆಯನ್ನು ನವೋದಯ ಫ್ರೆಂಡ್ಸ್ ಹರ್ತಟ್ಟು ಅಧ್ಯಕ್ಷ ಮಹೇಶ್ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಸದಾಶಿವ ಹೊಳ್ಳ, ಪತ್ರಕರ್ತ ರವೀಂದ್ರ ಕೋಟ,ಕಾರ್ಕಳ ಸಿವಿಲ್ ಇಂಜಿನಿಯರ್ ಪ್ರಕಾಶ್ ಆಚಾರ್ಯ ,ಓಂಕಾರ್ ಆಟೋ ವರ್ಕ್ಸ್ ಪ್ರಕಾಶ್ ಆಚಾರ್ಯ ಬಗ್ವಾಡಿ, ಉಡುಪಿ ವೈದ್ಯಕೀಯ ಪ್ರತಿನಿಧಿಗಳ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್, ನವೋದಯ ಫ್ರೆಂಡ್ಸ್ ಗೌರವಾಧ್ಯಕ್ಷ ಕಿರಣ್ ಕುಮಾರ್ ಕೋಟ,ಹರ್ತಟ್ಟು ಯುವಕ ಮಂಡಲ ಅಧ್ಯಕ್ಷ ಹರೀಷ್ ದೇವಾಡಿಗ,ಕೋಟ ಗ್ರಾಮಪಂಚಾಯತ್ ಸದಸ್ಯ ಪಾಂಡು ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನವೋದಯ ಫ್ರೆಂಡ್ಸ್ ಸದಸ್ಯ ನಿಖಿಲೇಶ್ ಆಚಾರ್ಯ ನಿರೂಪಿಸಿದರು. ಕಾರ್ಯಕ್ರಮ ಸಂಯೋಜಕ ಶ್ರೀನಾಥ್ ಪೂಜಾರಿ ವಂದಿಸಿದರು.

Click Here

LEAVE A REPLY

Please enter your comment!
Please enter your name here