ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರ್ಕೊಡು 38ನೇ ಬೂತ್ ಅಧ್ಯಕ್ಷ ರಾಮಚಂದ್ರ ಶೇರಿಗಾರ್ ಅವರ ನಿವಾಸದಲ್ಲಿ ಕೇಂದ್ರ ಸಚಿವೆ ಉಡುಪಿ ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉದ್ಘಾಟಿಸಿ ಮಾತನಾಡಿದ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನೂರ ಐವತ್ತಕ್ಕೂ ಅಧಿಕ ಸೀಟ್ ನೊಂದಿಗೆ ಸರ್ಕಾರ ರಚಿಸಬೇಕು, ಆ ನಿಟ್ಟಿನಲ್ಲಿ ಬೂತ್ ಮಟ್ಟದ ಪ್ರತಿ ಕಾರ್ಯಕರ್ತರು ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಬೇಕು ಆ ಮೂಲಕ ಅಭ್ಯರ್ಥಿಗಳು ಅತೀ ಹೆಚ್ಚಿನ ಮತಗಳ ಅಂತರದೊಂದಿಗೆ ವಿಜಯ ಸಾಧಿಸಲು ಸಹಾಕಾರಿಯಾಗಬೇಕು ಎನ್ನುತ್ತ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕುರಿತಾಗಿ ಮಾತನಾಡಿದರು.
ಬೂತ್ ಅಧ್ಯಕ್ಷರಾದ ರಾಮಚಂದ್ರ ಶೇರಿಗಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯ್ಲಾಡಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮ ಮಂಡಳಿಯ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುತ್ಯಾರ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣ ಗೊಲ್ಲ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ ವಂದಿಸಿದರು, ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ಸುರೇಂದ್ರ ಕಾಂಚನ್ ವಂದೇ ಮಾತರಂ ಗೀತೆ ಹಾಡಿದರು.











